Breaking
Thu. Mar 13th, 2025

ರಣಜಿ ಟ್ರೋಫಿ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್.

ಬೆಂಗಳೂರು: ಟೀಂ ಇಂಡಿಯಾ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈಗ ಕಳಪೆ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅವರ ಕಳಪೆ ಪ್ರದರ್ಶನದಿಂದಾಗಿ ಅವರ ವೃತ್ತಿಜೀವನದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ರೆಡ್-ಬಾಲ್ ಕ್ರಿಕೆಟ್‌ನಲ್ಲಿ ಕಷ್ಟಪಡುತ್ತಿರುವ ವಿರಾಟ್ ಕೊಹ್ಲಿಗೆ ಮಾಜಿ ಆಟಗಾರರು ದೇಶೀಯ ಕ್ರಿಕೆಟ್ ಆಡುವಂತೆ ಸಲಹೆ ನೀಡಿದ್ದಾರೆ.

ಬಿಸಿಸಿಐ ಇತ್ತೀಚೆಗೆ ನಡೆಸಿದ ಸಭೆಯಲ್ಲಿ ಆಫ್-ಸೀಸನ್‌ನಲ್ಲಿರುವ ಆಟಗಾರರು ದೇಶೀಯ ಕ್ರಿಕೆಟ್ ಆಡುವಂತೆ ಸೂಚಿಸಿದೆ. ಹೀಗಾಗಿ, ವಿರಾಟ್ ಈಗ ದೆಹಲಿ ಪರ ರಣಜಿ ಟ್ರೋಫಿ ಆಡಲಿದ್ದಾರೆ. 13 ವರ್ಷಗಳ ನಂತರ ಅವರು ದೇಶೀಯ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 30 ರಂದು ವಿರಾಟ್ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ಡೆಲ್ಲಿ ಪರ ಕಣಕ್ಕಿಳಿದರೆ, ತಂಡಕ್ಕೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಇದಷ್ಟೇ ಅಲ್ಲದೇ ದೇಶಿ ಕ್ರಿಕೆಟ್‌ನಲ್ಲಿ ಮಿಂಚುವ ಮೂಲಕ ಆತ್ಮವಿಶ್ವಾಸ ಕಂಡುಕೊಳ್ಳುವ ಗುರಿ ಕೊಹ್ಲಿಯದ್ದೂ ಆಗಿದೆ.

ದೆಹಲಿ ರಣಜಿ ಟ್ರೋಫಿಯ ಎರಡನೇ ಸುತ್ತಿನಲ್ಲಿ ಎರಡು ಪಂದ್ಯಗಳನ್ನು ಆಡಬೇಕಿದೆ. ಈ ನಡುವೆ, ವಿರಾಟ್ ಕೊಹ್ಲಿ ಋತುವಿನ ಕೊನೆಯ ಹಂತದಲ್ಲಿ ಆಡಲು ಲಭ್ಯರಿರುವುದಾಗಿ ತಿಳಿಸಿದ್ದಾರೆ. ಜನವರಿ 23 ರಂದು ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯರಿರುವುದಿಲ್ಲ, ಏಕೆಂದರೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅವರ ಕುತ್ತಿಗೆಗೆ ಗಾಯವಾಗಿದೆ. ಆದರೆ, ಮುಂದಿನ ಪಂದ್ಯಕ್ಕೆ ಅವರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ (DDCA) ತಮ್ಮ ಲಭ್ಯತೆಯ ಬಗ್ಗೆ ಅವರು ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *