Breaking
Sat. Jul 26th, 2025

ಹೆಚ್ಚು ಸಾಲ ವಸೂಲಿ: ಬ್ಯಾಂಕ್​ಗಳ ವಿರುದ್ಧವೇ ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ

ದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರು, ಬ್ಯಾಂಕ್‌ಗಳು ಪಾವತಿಸಬೇಕಾದ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿವೆ ಎಂದು ಆರೋಪಿಸಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪರವಾಗಿ ಹಿರಿಯ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿದ್ದು, ಬ್ಯಾಂಕ್‌ಗಳು ವಸೂಲಿಸಿದ ಸಂಪೂರ್ಣ ಲೆಕ್ಕಪತ್ರಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. ಈ ಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೇರಿದಂತೆ 10 ಬ್ಯಾಂಕ್‌ಗಳಿಗೆ ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.

ಮಲ್ಯ ಅವರ ಪ್ರಕಾರ, ಕಿಂಗ್‌ಫಿಷರ್ ಏರ್‌ಲೈನ್ಸ್‌ನ ಸಾಲ ಮೊತ್ತ 6,200 ಕೋಟಿ ರೂಪಾಯಿಯಾಗಿದ್ದು, ಬ್ಯಾಂಕ್‌ಗಳು ಇದಕ್ಕಿಂತ ಹೆಚ್ಚು, 1400 ಕೋಟಿ ರೂಪಾಯಿ ವಸೂಲಮಾಡಿವೆ. ಹೀಗಾಗಿ, ಅವರು ವಸೂಲಿಯಾದ ಲೆಕ್ಕಪತ್ರಗಳನ್ನು ನೀಡುವಂತೆ ಕೋರಿ, ಮುಂದಿನ ವಸೂಲಾತಿ ಕ್ರಮಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕೋರಿದ್ದಾರೆ.

Related Post

Leave a Reply

Your email address will not be published. Required fields are marked *